ಡಿಕೆಶಿಗೆ ಹೈ ಶಾಕ್

ಡಿಕೆಶಿಗೆ ಹೈ ಶಾಕ್

ಬೆಂಗಳೂರು, ಜ.10 : ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆಗಳಿವೆ. ಒಕ್ಕಲಿಗರ ಬದಲಿಗೆ ಲಿಂಗಾಯತರಿಗೆ ಮಣೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗುತ್ತಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಹೌದು, ಬಿಜೆಪಿ ಬೆಂಬಲಕ್ಕೆ ನಿಂತಿರುವ ಲಿಂಗಾಯತರ ಸೆಳೆಯಲು ಕಾಂಗ್ರೆಸ್ ಹೈಕಮಾಂಡ್ ಈ ಮಾಸ್ಟರ್ ಪ್ಲಾನ್ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದಲ್ಲಿ ಪರ್ಯಾಯ ನಾಯಕರ ಬೆಳೆಸುವ ಪ್ರಯತ್ನವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಎಂ.ಬಿ. ಪಾಟೀಲ್ ಅಥವಾ ಈಶ್ವರ್ ಖಂಡ್ರೆಗೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂಉತ್ತರ ಕರ್ನಾಟಕ ಭಾಗದವರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆಸಲಾಗಿದೆ. ಈ ನಿರ್ಧಾರದ ಹಿಂದೆ ಸಿದ್ಧರಾಮಯ್ಯ ಬಣದ ಕೈವಾಡವಿರಬಹುದು ಎನ್ನುತ್ತಿವೆ ಮೂಲಗಳು.

ಫ್ರೆಶ್ ನ್ಯೂಸ್

Latest Posts

Featured Videos