ಮಂಗಳೂರು , ಸೆ. 7 : ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ.ರೂಪೇಶ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೆ.6ರಂದು ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.ಇದೀಗ ಅವರ ಸ್ಥಾನಕ್ಕೆ ಸಿಂಧು ಅವರನ್ನು ನೇಮಕ ಮಾಡಲಾಗಿದೆ. ಇವರು ಉಡುಪಿ ಸಿಇಒ ಆಗಿದ್ದರು. ಮೈಸೂರಿನ ಎಂಜಿನಿಯರಿಂಗ್ ಪದವೀಧರೆಯಾಗಿರುವ ಸಿಂಧು 2011 ಬ್ಯಾಚ್ ನ ಎಎಸ್ ಅಧಿಕಾರಿ. ಅವರು ಆ ವರ್ಷದ ರಾಜ್ಯದ ನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.