ಬೆಂಗಳೂರು ಗ್ರಾಮಾಂತರ, ಸೆ. 26 : ಹೊಸಕೋಟೆ ತಾಲೂಕು ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮದ ವಿದ್ಯಾರ್ಥಿ ಜಿ. ಪವನ್ (14) ಶಂಕಿತ ಡೆಂಗ್ಯೊಗೆ ಬಲಿ. ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾಥಿ೯ ನಂದಗುಡಿಯ ಕನಾ೯ಟಕ ಪಬ್ಲಿಕ್ ಸ್ಕೂಲ್ ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.ಕಳೆದ ಹದಿನೈದು ದಿನಗಳಿದಂದ ಜ್ವರದಿಂದ ಬಳಲುತ್ತಿದ್ದರಿಂದ ಶಾಲೆಗೆ ಗೈರಾಗಿದ್ದ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.