ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಸ್ಪರ್ಧಿಸುತ್ತಿದ್ದಾರೆ.
ಡಿಕೆ ಸುರೇಶ್ ಬಿರುಸಿನ ಪ್ರಚಾರ ಬೆಂಗಳೂರು ಗ್ರಾಮಾಂತರದಲ್ಲಿ ಕುತೂಹಲ ಕೆರಳಿಸಿರುವ ಲೋಕಸಭಾ ಕ್ಷೇತ್ರವಾಗಿದೆ. ಡಿಕೆ ಸುರೇಶ್ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಕಣಕ್ಕಿಳಿದಿರುವುದು ತೀವ್ರ ಕುತುಹಲಾಕಾರಿಗೆ ಕಾರಣವಾಗಿದೆ.
ನಟ ದರ್ಶನ್ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಇಂದು ಪ್ರಚಾರ ನಡೆಸಲಿದ್ದಾರೆ. ಎರಡು ದಿನಗಳ ಹಿಂದೆ ಅಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದ ದರ್ಶನ್ ಈಗ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಸುರೇಶ್, “ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಶನಿವಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸುತ್ತಿದ್ದಾರೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಬೇಕು.” ಎಂದು ಮನವಿ ಮಾಡಿದ್ದಾರೆ.