ಸ್ಟಾರ್ ಚಂದ್ರು ಪರ ಅದ್ದೂರಿ ಪ್ರಚಾರ ಮಾಡಿದ ನಟ ದರ್ಶನ್

ಸ್ಟಾರ್ ಚಂದ್ರು ಪರ ಅದ್ದೂರಿ ಪ್ರಚಾರ ಮಾಡಿದ ನಟ ದರ್ಶನ್

ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಟಾರ್ ಚಂದ್ರು ಅವರು ಸ್ಪರ್ಧಿಸುತ್ತಿದ್ದಾರೆ, ಅವರ ಪರವಾಗಿ ರಾಜಕೀಯ ವ್ಯಕ್ತಿಗಳು ಹಾಗೂ ಸಿನಿಮಾ ನಟರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ನಿನ್ನೆ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅದ್ಧೂರಿ ಪ್ರಚಾರ ನಡೆಸಿದರು. ತಾಲೂಕಿನ ಕೆಸ್ತೂರು, ಕೆ. ಹೊನ್ನಲಗೆರೆ, ಮಡೇನಹಳ್ಳಿ ಕ್ರಾಸ್, ಕೆ.ಎಂ.ದೊಡ್ಡಿ, ಬೆಸಗರಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ ನಟ ದರ್ಶನ್ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಮದ್ದೂರು ತಾಲೂಕಿನ ಕೊಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರೋಡ್ ಶೋ ಮೂಲಕ ಪ್ರಚಾರ ಸಭೆಯಲ್ಲಿ ಮಾತನಾಡಿ, ತೆರೆ ಹಿಂದಿರುವ ಕೆಲವು ನಾಯಕರು ನನಗೆ ಈ ಹಿಂದೆ ಮಾಡಿದ ಸಹಾಯ ಹಾಗೂ ಋಣವನ್ನು ಈ ಜನ್ಮದಲ್ಲಿ ತೀರಿಸಲು ಆಗುವುದಿಲ್ಲ. ಆದ್ದರಿಂದ ಅವರಿಗೋಸ್ಕರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದೇನೆ ಎಂದರು.

ಶಾಸಕರಾದ ಉದಯ್, ಗಣಿಗ ರವಿಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ, ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿ ಚೆನ್ನರಾಜು, ತಾಪಂ ಮಾಜಿ ಉಪಾಧ್ಯಕ್ಷರಾದ ರಾಮಚಂದ್ರು, ಬೆಕ್ಕಳಲೆ ರಘು, ಮುಖಂಡರಾದ ಕುಮಾರ್ ಕೊಪ್ಪ, ಕ್ರಾಂತಿಸಿಂಹ, ಚಿಕ್ಕೊನಹಳ್ಳಿ ತಮ್ಮಯ್ಯ, ಪರ್ವಿಜ್ ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos