ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರ ಭಾರಿ ಕುತೂಹಲ ಮೂಡಿಸಿದ್ದು, ಈ ನಡುವೆ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ನಡೆಸುತ್ತಿದ್ದಾರೆ.
ಇಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ನಟ ದರ್ಶನ್, ಚಲುವರಾಯಸ್ವಾಮಿ ಅವರ ಕೈ ಬಲಪಡಿಸಲು ಸ್ಟಾರ್ ಚಂದ್ರುಗೆ ಮತ ನೀಡಿ ಎಂದು ಮನವಿ ಮಾಡಿದರು.
ನಾನು ಇಂದು ಕಾಂಗ್ರೆಸ್ ಪರ ಬಂದಿರುವುದಕ್ಕೆ ಒಂದೇ ಕಾರಣವಿದೆ. 2019ರ ಚುನಾವಣೆಯಲ್ಲಿ ಚೆಲುವಣ್ಣ ನಮಗೆ ಸಹಾಯ ಮಾಡಿದ್ರು ಆ ಒಂದು ಋಣವನ್ನ ಜನ್ಮ ಪೂರ್ತಿ ತೀರಿಸಲು ಆಗಲ್ಲ. ಚಲುವಣ್ಣ ಮಾಡಿದ ಸಹಾಯ 7 ಜನ್ಮವಾದರೂ ತೀರಿಸಲು ಆಗಲ್ಲ. ಹೀಗಾಗಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವುದಾಗಿ ನಟ ದರ್ಶನ್ ತಿಳಿಸಿದ್ದಾರೆ.