ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!

ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!

ಬೆಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ನಗರದ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್​ನಲ್ಲಿರುವ ಮನೆ ಮತ್ತು ಕಚೇರಿಯ ಮೇಲೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಎಸ್ಕೇಪ್​ ಆಗಿದ್ದಾರೆ.

ಇದ್ರಿಂದ ಮನೆ ಹಾಗೂ ದರ್ಶನ್​ ಅವರ ಕಾರಿನ ಗಾಜು ಪುಡಿಪುಡಿಯಾಗಿದೆ. ರಾಜಕೀಯ ದ್ವೇಷದಿಂದ ಈ ರೀತಿ ಕಲ್ಲು ತೂರಾಟ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ರಾಜರಾಜೇಶ್ವರಿ‌ ನಗರ ಪೊಲೀಸರು ಹಾಗೂ ಕೆಂಗೇರಿ ಎಸಿಪಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ರು.

ಫ್ರೆಶ್ ನ್ಯೂಸ್

Latest Posts

Featured Videos