ಮನೆ ಮೇಲೆ ಕಲ್ಲು; ಕುಮಾರಸ್ವಾಮಿ ವಿರುದ್ಧ ದರ್ಶನ್ ಅಭಿಮಾನಿಗಳ ಆಕ್ರೋಶ

ಮನೆ ಮೇಲೆ ಕಲ್ಲು; ಕುಮಾರಸ್ವಾಮಿ ವಿರುದ್ಧ ದರ್ಶನ್ ಅಭಿಮಾನಿಗಳ ಆಕ್ರೋಶ

ಬೆಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್​ನಲ್ಲಿರುವ ದರ್ಶನ್​ ಮನೆ ಮತ್ತು ಕಚೇರಿಯ ಮೇಲೆ ಬೆಳಗಿನ ಜಾವ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಂದೇಮಾತರಂ ಸಮಾಜ ಸೇವಾ ಸಂಸ್ಥೆ ಹಾಗೂ ದರ್ಶನ್ ಅಭಿಮಾನಿಗಳು, ಸರ್ಕಾರ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು.

ಮಂಡ್ಯದಲ್ಲಿ ದರ್ಶನ್ ಸುಮಲತಾರಿಗೆ ಬೆಂಬಲ ಸೂಚಿಸಿದ್ದಾರೆ. ಸೋಲಿನ ಭೀತಿಯಲ್ಲಿ ಕಿಡಿಗೇಡಿಗಳು ಈ ರೀತಿಯ ಕೃತ್ಯಗಳನ್ನ ಮಾಡ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ಜೊತೆಗೆ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ರು.

ಫ್ರೆಶ್ ನ್ಯೂಸ್

Latest Posts

Featured Videos