ಬೆಂಗಳೂರು , ಆ. 15 : ಖ್ಯಾತ ಸಾಹಿತಿ, ಕಾದಂಬರಿಗಾರ ಡಾ.ಎಸ್.ಎಲ್.ಭೈರಪ್ಪನವರು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಪ್ರವಾಹ , ಬರ ಹಿನ್ನೆಲೆ ಸರಳ ದಸರಾ ಆಚರಣೆ ಮಾಡುವುದು ಸೂಕ್ತ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದರು. ಸೆ.29ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಅ. 8ಕ್ಕೆ ಜಂಬೂ ಸವಾರಿ ನಡೆಯಲಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ದಸರಾ ಉದ್ಘಾಟನೆಗೆ ಎಸ್.ಎಲ್.ಭೈರಪ್ಪ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಅಲ್ಲದೆ, ದಸರಾ ಆಚರಣೆಗೆ 20.50 ಕೋಟಿ ರೂ.ಬಿಡುಗಡೆಗೂ ಒಪ್ಪಿಗೆ ನೀಡಲಾಯಿತು ಎಂದರು.