ಬೆಂಗಳೂರು, ಆ. 14: ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಉತ್ಸವದ ಕುರಿತು ಉನ್ನತ ಮಟ್ಟದ ಸಭೆ ಜರುಗಿತು.
ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಶ್ರೀನಿವಾಸ ಪ್ರಸಾದ್, ತನ್ವೀರ್ ಸೇಠ್, ರಾಮ್ ದಾಸ್, ಎನ್.ಮಹೇಶ್, ಯತೀಂದ್ರ, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ನಾಗರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ.ಸಿ.ಕಳಸದ್ ಹಾಗೂ ಮೈಸೂರು ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.