ದತ್ತಾತ್ರೇಯ ದರ್ಶನ ಪಡೆದ ಸಚಿವ

ದತ್ತಾತ್ರೇಯ ದರ್ಶನ ಪಡೆದ ಸಚಿವ

ಕಲಬುರಗಿ, ಜು. 2 : ಕೋವಿಡ್ – 19 ತಡೆ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನಗಳಿಗೆ ಪ್ರವೇಶ ನಿಷೇಧಿಸಲಾಗಿದೆ.  ಸಚಿವರೊಬ್ಬರು ದತ್ತಾತ್ರೇಯನ ದರ್ಶನ ಪಡೆದುಕೊಂಡಿದ್ದಾರೆ.  ಕಲಬುರಗಿ ಜಿಲ್ಲೆ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಪ್ರವೇಶ ನಿಷೇಧ ಹೇರಲಾಗಿದೆ. ಈ ನಡುವೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜನರಿಗೆ ಪ್ರವೇಶ ನೀಡದ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ಟೀಕೆ ಮಾಡುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos