ಡಿಸಿ ಕಛೇರಿಗೆ ಮುತ್ತಿಗೆ

ಡಿಸಿ ಕಛೇರಿಗೆ ಮುತ್ತಿಗೆ

ಚಿಕ್ಕಬಳ್ಳಾಪುರ , ಸೆ. 21 : ಜಿಲ್ಲೆಯಾಗಿ 12 ವರ್ಷ ಕಳೆದರೂ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಸ್ವಂತ ಕಟ್ಟಡ ಇಲ್ಲ. ಸ್ವಂತ ಕಟ್ಟಡ ಕಾಮಗಾರಿ ವಿಳಂಬ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಶನಿವಾರ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಪ್ರತಿಭಟನೆ ನಡೆಸಿದ್ದಾರೆ.
ನಗರದ ಹೊರ ವಲಯದ ಅಣಕನೂರು ಸಮೀಪ ಇರುವ ಜಿಲ್ಲಾಧಿಕಾರಿ ಕಚೇರಿ ಎದುರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲಾಡಳಿತ ಭವನ ಸಮೀಪವೇ ಕಾಲೇಜು ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಅನುದಾನದ ಕೊರತೆಯಿಂದ ಕಳೆದ ಹತ್ತು ವರ್ಷಗಳಿಂದ ಕುಂಠಿತ ಸಾಗಿದೆಯೆಂದು ಪ್ರತಿಭಟನಾಕಾರರು ಕಿಡಿಕಾರಿ ಚುನಾಯಿತ ಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದರು.

ಫ್ರೆಶ್ ನ್ಯೂಸ್

Latest Posts

Featured Videos