ಬಳ್ಳಾರಿ, ಜು.31 : ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಐದು ದಿನಗಳಷ್ಟೇ ಕಳೆದಿದೆ. ಸಂಪುಟ ವಿಸ್ತರಣೆಯಾಗದ ಕಾರಣ ಸಚಿವ ಸ್ಥಾನ ಹಾಗೂ ಉಪ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಶುರುವಾಗಿದೆ.
ಹಲವರು ತಮ್ಮ ಸಮುದಾಯ ಹಾಗೂ ತಮ್ಮ ಕ್ಷೇತ್ರದ ನಾಯಕರಿಗೆ ಸಚಿವ ಸ್ಥಾನ ನೀಡಲು ಸಿಎಂ ಭೇಟಿ ಮಾಡಿ ಮನವಿ ಮಾಡುತ್ತಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗೆ ಕೂಗು ಕೇಳಿ ಬಂದಿದೆ.
ಪರಿಶಿಷ್ಟ ಜಾತಿ ಕೋಟಾ ಅಡಿಯಲ್ಲಿ ಕಾರಜೋಳ ಹಾಗೂ ST ಸಮುದಾಯದ ನಾಯಕ ಶ್ರೀ ರಾಮುಲುಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹಿಸಿದ್ದಾರೆ. ಈಗಾಗಲೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ YSR ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಹಿಂದುಳಿದ ಸಮುದಾಯಗಳಿಗೆ 5 ಉಪ ಮುಖ್ಯಮಂತ್ರಿ ಹುದ್ದೆ ನೀಡಿದಂತೆ ರಾಜ್ಯದಲ್ಲಿಯೂ ನೀಡುವುದೂ ಸೂಕ್ತ ಎಂದು ರಾಜ್ಯ ನಾಯಕರಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ದಲಿತ ಹಾಗೂ ಶೋಷಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಆದರೆ ಯಡಿಯೂರಪ್ಪ ನೇತೃತ್ವದ ಸರ್ಕಾರದಿಂದ ನ್ಯಾಯ ದೊರೆಯುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.