ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ: ಡಿಸಿಎಂ

ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ: ಡಿಸಿಎಂ

ಬೆಂಗಳೂರು: ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಹಾಗೂ ಶಾರದಾ ಮೋಹನ್ ಶೆಟ್ಟಿ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇನ್ನೂ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ಮಾತನಾಡಿದರು, ಮಾಲೀಕಯ್ಯಾ ಗುತ್ತೇದಾರ್ ಅವರು ಬಹಳ ವರ್ಷಗಳಿಂದ ನಮ್ಮ ಜೊತೆಗಿದ್ದವರು. ಕಾರಣಾಂತರಗಳಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿ ಭವಿಷ್ಯವಿಲ್ಲ ಎಂದು ಅರಿವಾಗಿ ಮತ್ತೆ ಮರಳಿ ಬಂದಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ. ಮಾಲೀಕಯ್ಯಾ ಅವರು ಪಕ್ಷದ ಅನೇಕ ಹುದ್ದೆಗಳನ್ನು ಅಲಂಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ.  ಈಗ ಯಾವುದೇ ಷರತ್ತುಗಳನ್ನು ವಿಧಿಸದೆ ಮರಳಿ ಬಂದಿದ್ದಾರೆ.

ಇದೇ ವೇಳೆ ಮಾಜಿ ಶಾಸಕರಾದ ಶಾರದ ಮೋಹನ್ ಶೆಟ್ಟಿ ಅವರು ಹಾಗೂ ಆಮ್ ಆದ್ಮಿ ಪಕ್ಷದ ನಟರಾಜ್ ಅವರು ಹಾಗೂ ಸಿದ್ದು ಸಾಲಮನಿ, ಕರುಣಾಕರ್ ಭಟ್, ರಾಮಣ್ಣ, ಮಲ್ಲೇಗೌಡ ಪಾಟೀಲ್, ರವಿ ಪಾಟೀಲ್, ಚಂದ್ರಕಾಂತ್, ಶಿವಪ್ಪ ಅವರು ಪಕ್ಷ ಸೇರ್ಪಡೆಯಾದರು. ಈ ಸಂಧರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos