ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರನ್ನು ಇಂದು ಸದಾಶಿವನಗರದ ಬಿಡಿಎ ಕಚೇರಿಯಲ್ಲಿ ಭೇಟಿ ಮಾಡಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಮೈಸೂರಿನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ನನ್ನು ಅಭಿವೃದ್ಧಿ ಮಾಡುವ ಸಂಬಂಧ ನಾರಾಯಣಮೂರ್ತಿ ಅವರು ಇಂದು ಭೇಟಿ ಮಾಡಿ ನನ್ನೊಂದಿಗೆ ಚರ್ಚಿಸಿದರು.
ಇದೇ ಸಂಸ್ಥೆಯಲ್ಲಿ ನಾರಾಯಣ ಮೂರ್ತಿ ಅವರು ಸಹ ಶಿಕ್ಷಣ ಪಡೆದಿದ್ದರು. ಹೀಗಾಗಿ ಈ ಸಂಸ್ಥೆಯನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಿದ್ದಾರೆ. ಇದರ ಬಗ್ಗೆ ಚರ್ಚಿಸಿದರು. ಜೊತೆಗೆ ಬೆಂಗಳೂರಿನ ಅಭಿವೃದ್ಧಿ ಬಗ್ಗೆಯೂ ಕೆಲ ಸಲಹೆ ಸೂಚನೆ ನೀಡಿದರು ಎಂದರು.