ಬೆಳಗಾವಿ, ಆ. 27: ಪ್ರವಾಹಪೀಡಿತ ಸ್ವಕ್ಷೇತ್ರದಲ್ಲಿ 3 ದಿನಗಳ ಕಾಲ ಪ್ರವಾಸ ನಡೆಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು ಬೆಳಗಾವಿಯ ಅಥಣಿಯಲ್ಲಿ ಮಾತನಾಡಿ, ಮಾನ, ಮರ್ಯಾದೆ ಬಿಟ್ಟಿರುವ ಬಿಜೆಪಿಯವರು ಸದನದಲ್ಲಿ ಕುಳಿತುಕೊಂಡು ಬ್ಲೂಫಿಲಂ ನೋಡಿದವರನ್ನು ಡಿಸಿಎಂ ಮಾಡಿದ್ದಾರೆ. ಇಂತಹ ಸರ್ಕಾರದಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಲೇವಡಿ ಮಾಡಿದ್ದಾರೆ.
ನಿನ್ನೆ ಬಾಗಲಕೋಟೆ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಂದು ಬೆಳಗಾವಿ ಪ್ರವಾಸದಲ್ಲಿರುವ ಅವರು ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರಿಗೂ ನಾವು ತಕ್ಕ ಪಾಠ ಕಲಿಸುತ್ತೇವೆ. ಶ್ರೀಮಂತ ಪಾಟೀಲ್ ಅವರಿಗೆ ಕೂಡ ಸರಿಯಾದ ಪಾಠ ಕಲಿಸುತ್ತೇವೆ ಎಂದು ಅಥಣಿಯಲ್ಲಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.