ಇಂದು ಸಂಜೆ ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಇಂದು ಸಂಜೆ ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ತುಮಕೂರು,  ಮಾ.27, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಕುರಿತು ಇಂದು ಸಭೆ ಕರೆಯಲಾಗಿದೆ. ಸಭೆಯಲ್ಲಿ ದೇವೇಗೌಡರ ಬಂದು ಪ್ರಚಾರ ನಡೆಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಭಾಗಿಯಾಗುವ ಬಗ್ಗೆ ಚರ್ಚೆಸಿಲಾಗುವುದು ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಜಿ ಪರಮೇಶ್ವರ್, ಕಾಂಗ್ರೆಸ್-ಜೆಡಿಎಸ್​​ ಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ತುಮಕೂರು ಲೋಕಸಭೆಯಲ್ಲಿ ದೇವೇಗೌಡರನ್ನ ಗೆಲ್ಲಿಸಲು ಪರಸ್ಪರ ಚರ್ಚೆ ನಡೆಸಲಾಗುತ್ತದೆ. ಜಿಲ್ಲೆಯ ಎರಡು ಪಕ್ಷದ ಮುಖಂಡರು ಯಾವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂಬುದು ಕೂಡ ಚರ್ಚೆಯಾಗಲಿದೆ. ಮುದ್ದಹನುಮೇಗೌಡ ಹಾಗೂ ಕೆ.ಎನ್. ರಾಜಣ್ಣರನ್ನ ಮನವೊಲಿಸುವ ಪ್ರಯತ್ನ ನಡೆದಿದೆ. ನಾನು ಕೂಡ ಒಂದು ಬಾರಿ ಮುದ್ದಹನುಮೇಗೌಡರ ಜೊತೆ ಮಾತನಾಡಿದ್ದೇನೆ. 29 ರಂದು ರಾಜಣ್ಣ ಹಾಗೂ ಮುದ್ದಹನುಮೇಗೌಡರು ನಾಮಪತ್ರ ವಾಪಸ್ ತೆಗೆದುಕೊಳ್ಳುವ ವಿಶ್ವಾಸವಿದೆ. ಈ ಬಗ್ಗೆ ಹೈಕಮಾಂಡ್ ಕೂಡ ಮಾತನಾಡಿದೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos