ನೆಲಮಂಗಲ, ಸೆ. 11: ಡಿಸಿಎಂ ಗೋವಿಂದ ಕಾರಜೋಳ ದಿಢೀರ್ ಭೇಟಿ, ಯಾವೊಬ್ಬ ಅಧಿಕಾರಿಗೂ ಮಾಹಿತಿ ನೀಡದೆ ದಿಢೀರ್ ಭೇಟಿ, ನೆಲಮಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ, ಪುರಸಭೆ ಅಧಿಕಾರಿಗಳ ನಡೆಗೆ ಡಿಸಿಎಂ ಗೋವಿಂದ ಕಾರಜೋಳ ಬೇಸರ.
ಡಿಸಿಎಂ ಗೋವಿಂದ ಕಾರಜೋಳ ಇಂದು ನೆಲಮಂಗಲಕ್ಕೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳ ವರ್ಗಕ್ಕೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇನ್ನೂ ವಿದ್ಯಾರ್ಥಿ ನಿಲಯದ ಸ್ವಚ್ಛತೆ, ಊಟ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಣೆ ನಡೆಸಿದರು. ವಿಶೇಷವೆಂದರೆ ಯಾವೊಬ್ಬ ನೆಲಮಂಗಲ ತಾಲೂಕು ಮಟ್ಟದ ಅಧಿಕಾರಿಗೂ ಮಾಹಿತಿ ನೀಡದೆ ದಿಢೀರ್ ಭೇಟಿ ನಡೆಸಿ, ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ.
ಕಸ ನಿರ್ವಹಣೆಯಲ್ಲಿ ನೆಲಮಂಗಲ ಪುರಸಭೆ ವೈಫಲ್ಯವನ್ನು ಕಂಡ ಡಿಸಿಎಂ, ಪುರಸಭೆ ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿಎಂ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸುದ್ದಾರೆ. ಇನ್ನೂ ರಾಜಕೀಯವಾಗಿ ಮಾತನಾಡಿದ ಡಿಸಿಎಂ, ಡಿಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಒಕ್ಕಲಿಗರ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಮಾತನಾಡಿ, ನಾನು ಈ ಬಗ್ಗೆ ಮಾತನಾಡಲ್ಲ. ಅದು ನನಗೆ ಸಂಬಂಧ ಇಲ್ಲದ ವಿಷಯ, ದೇಶದಲ್ಲಿ ಕಾನೂನು ಕ್ರಮಗಳು ನಡೆಯತ್ತಿರುತ್ತವೆ, ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ, ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.