ಡಿಸಿಎಂ ಪುತ್ರನ ಕಾರು ಅಪಘತ!

ಡಿಸಿಎಂ ಪುತ್ರನ ಕಾರು ಅಪಘತ!

ಬಾಗಲಕೋಟೆ : ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದೆ.

ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿದ್ದಾರೆ.

ಬಳಿಕ ಅಪಘಾತ ಸಂಬಂಧ ಮಾಹಿತಿ ನೀಡಿರುವ ಎಸ್‌ಪಿ ಲೋಕೇಶ್, “ದೇವಲಾಪುರ ಕ್ರಾಸ್ ಬಳಿ ಸಂಜೆ 6-7 ಗಂಟೆ ನಡುವೆ ಅಪಘಾತ ನಡೆದಿದೆ. ಐಪಿಸಿ 304 ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಚಿದಾನಂದ ಸವದಿ ಕಾರನ್ನು ಚಾಲನೆ ಮಾಡುತ್ತಿರಲಿಲ್ಲ” ಎಂದರು.

ಕಾರು ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಮಂದಿ ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು.

ಚಾಲಕ ಹನುಮಂತ ಸಿಂಗ್ ರಜಪೂತ್ ಎಂಬುವರು ಕಾರು ಚಲಿಸುತ್ತಿದ್ದರು. ಅವರನ್ನು ವಶಕ್ಕೆ ತೆಗೆದುಕೊಂಡು ಹೇಳಿಕೆ ಪಡೆದುಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos