ಬಂದ್ ಬೆಂಬಲಿಸಿ ರಕ್ಷಣಾಸೇನೆ ಪ್ರತಿಭಟನೆ

ಬಂದ್ ಬೆಂಬಲಿಸಿ ರಕ್ಷಣಾಸೇನೆ ಪ್ರತಿಭಟನೆ

ಚಾಮರಾಜನಗರ: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದು ಮಾಡುವಂತೆ ಆಗ್ರಹಿಸಿ ಕನ್ನಡಪರಸಂಘಟನೆಗಳು ಕರೆ ನೀಡಿರುವ ಬಂದ್ ಅನ್ನು ಬೆಂಬಲಿಸಿ ಕರ್ನಾಟಕ ರಕ್ಷಣಾಸೇನೆ ಜಿಲ್ಲಾಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.                                      ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಬೈಕ್ ನಲ್ಲಿ ತೆರಳಿದ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಮಾವೇಶಗೊಂಡು, ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಮಿಂಚುನಾಗೇಂದ್ರ, ತಾಲೂಕು ಅಧ್ಯಕ್ಷ ಸಿ.ಡಿ.ಪ್ರಕಾಶ್, ಉಪಾಧ್ಯಕ್ಷ ಗುರುಪ್ರಸಾದ್, ಜಿಲ್ಲಾಸಂಚಾಲಕ ಮಹೇಶ್, ಯಡಪುರ ಗ್ರಾಮಘಟಕದ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಜಗದೀಶ್ ಬಾಬು, ನಗರಘಟಕದ ಗೋವಿಂದರಾಜು, ಇತರರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos