ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವ್ರು ರಕ್ಷಣಾ ಇಲಾಖೆಗೆ ಸಂಬಂಧಪಟ್ಟಂತೆ ಖಡಕ್ ನಿರ್ಧಾರ ತೆಗೆದುಕೊಂಡಿದ್ದಾರೆ.
ರಕ್ಷಣಾ ಇಲಾಖೆಯಲ್ಲಿ ನಾಗರಿಕ ಸೇವಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ 5 ಹಿರಿಯ ಅಧಿಕಾರಿಗಳನ್ನು ಮನೆಗೆ ಕಳುಹಿಸಿದ್ದಾರೆ.
ಈ 5 ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಭಾಗ್ಯ ಕಲ್ಪಿಸಿ, ರಕ್ಷಣಾ ಸಚಿವೆ ನಿರ್ಮಲಾ, ಅವ್ರನ್ನ ಮನೆಗೆ ಕಳುಹಿಸಿದ್ದಾರೆ. ಯಾಕೆ ಹೀಗೆ? ಅವರೇನು ಅಂಥಾ ಅಪರಾಧ ಮಾಡಿದ್ದರು? ಅಂದ್ರೆ ಅವರದ್ದು ಕಳಪೆ ಸೇವೆ ಎಂದಿದ್ದಾರೆ ಸಚಿವೆ ನಿರ್ಮಲಾ ಸಿತಾರಾಮನ್.