ನವದೆಹಲಿಏ, 30, ನ್ಯೂಸ್ ಎಕ್ಸ್ ಪ್ರೆಸ್: ಪಶ್ಚಿಮ ದೆಹಲಿಯಲ್ಲಿ ನರೈನಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 4 ರಾಸಾಯನಿಕ ಕಾರ್ಖಾನೆಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಇನ್ನೊಂದು ಮೂಲಗಳ ಪ್ರಕಾರ ಈ ಅಗ್ನಿ ಆಕಸ್ಮಿಕದಲ್ಲಿ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳೊಂದಿಗೆ ಆಗಮಿಸಿದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟರು.