ಹೈಕಮಾಂಡ್ನಿಂದ ತುರ್ತು ಕರೆ: ದೆಹಲಿಗೆ ಸಿದ್ದರಾಮಯ್ಯ

ಹೈಕಮಾಂಡ್ನಿಂದ ತುರ್ತು ಕರೆ: ದೆಹಲಿಗೆ ಸಿದ್ದರಾಮಯ್ಯ

ಬೆಂಗಳೂರು, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದು, ತುರ್ತಾಗಿ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮಾ.22ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ.

ಗುರುವಾರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಬೇಕಿತ್ತು. ಆದರೆ, ಹೈಕಮಾಂಡ್ ನಾಯಕರಿಂದ ಕರೆ ಬಂದ ಹಿನ್ನಲೆಯಲ್ಲಿ ತುರ್ತಾಗಿ ದೆಹಲಿಗೆ ತೆರಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos