ಧಾರವಾಡ : ಬೈಪಾಸ್ ರಸ್ತೆ ಕುರಿತು ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆ ನಡೆಸಿರುವ ಸಭೆಯ ಅಂಶಗಳ ಒಳಗೊಂಡ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಒಳಗಾಗಿ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಬುಧವಾರ ವಿಡಿಯೋ ಸಂವಾದದ ಮೂಲಕ ಹುಬ್ಬಳ್ಳಿ-ಧಾರವಾಡ ಭಾಗದ ಕೆ.ಆರ್.ಡಿ.ಸಿ.ಎಲ್, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಮತ್ತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಭೆಯನ್ನು ನಡೆಸಲಾಯಿತು.