ಕೋಲಾರ ಟಿಕೆಟ್‌ ವಾರ್:‌ ಎಲ್ಲರೂ ಒಗ್ಗಟ್ಟಿನಿಂದಿ, ಕೆಲಸ ಮಾಡುತ್ತಾರೆ: ಡಿಸಿಎಂ

ಕೋಲಾರ ಟಿಕೆಟ್‌ ವಾರ್:‌ ಎಲ್ಲರೂ ಒಗ್ಗಟ್ಟಿನಿಂದಿ, ಕೆಲಸ ಮಾಡುತ್ತಾರೆ: ಡಿಸಿಎಂ

ಬೆಂಗಳೂರು: ಕೋಲಾರ ಕಾಂಗ್ರೆಸ್ ಲೋಕಸಭಾ ಟಿಕೆಟ್ ವಿಚಾರ್ದ ಬಗ್ಗೆ ಐದು ಶಾಸಕರು ಬಂಡಾಯ ವಿದ್ಯುತ್ ರಾಜೀನಾಮೆ ಡ್ರಾಮಾಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾರೂ ರಾಜೀನಾಮೆ ನೀಡಲ್ಲ, ಅಸಲಿಗೆ ಅಭ್ಯರ್ಥಿಯ ಘೋಷಣೆ ಇನ್ನೂ ಆಗಬೇಕಿದೆ, ಕೋಲಾರ ಭಾಗದ ಶಾಸಕರ ಒಂದು ಆಗ್ರಹವಿದೆ ಮತ್ತು ಅದನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೇರೆ ನಾಯಕರ ಜೊತೆ ಚರ್ಚಿಸುವುದಾಗಿ ಹೇಳಿದರು.

ಎಲ್ಲರೂ ದಾರಿಗೆ ಬಂದಿದ್ದಾರೆ ಅಂತ ಶಿವಕುಮಾರ್ ಹೇಳುವುದನ್ನು ನೀವು ಕೇಳಿಸಿಕೊಳ್ಳಬಹುದು. ಅಂದರೆ ರಾಜೀನಾಮೆ ನೀಡುತ್ತೇವೆಂದ ಶಾಸಕರನ್ನು ಅವರು ಈಗಾಗಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದುವರಿದು ಮಾತಾಡಿದ ಶಿವಕುಮಾರ್ ಎಲ್ಲರೂ ಒಗ್ಗಟ್ಟಿನಿಂದಿದ್ದಾರೆ, ಎಲ್ಲ ಶಾಸಕರು ಮತ್ತು ಕಾರ್ಯಕರ್ತರು ಒಂದುಗೂಡಿ ಕೆಲಸ ಮಾಡಲಿದ್ದಾರೆ, ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ಪಕ್ಷದ ಗುರಿಯಾಗಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos