ಬೆಂಗಳೂರು, ಏ. 2, ನ್ಯೂಸ್ ಎಕ್ಸ್ ಪ್ರೆಸ್: ಇಂದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಕೆರೆಗುಡ್ಡದಹಳ್ಳಿಯ ಗಂಗಾಧರಯ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ ಅವರು, ಮೋದಿ ಅವರು ದೇಶದ 130 ಕೋಟಿ ಜನರಿಗೂ ಚೌಕಿದಾರ್ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ದೇಶದ 130 ಕೋಟಿ ಜನರಿಗೂ ಚೌಕಿದಾರರು, ಅದರಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಹ ಸೇರಿದ್ದಾರೆ.
ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ. ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಸದಾನಂದಗೌಡರು, ಪ್ರಗತಿ ವರದಿಯನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಳುಹಿಸಬೇಕೋ ಅಥವಾ ಬೇರೆಲ್ಲಿಗಾದರೂ ಕಳುಹಿಸಬೇಕೋ ಎಂಬುದನ್ನು ಸಿದ್ದರಾಮಯ್ಯನವರೇ ತಿಳಿಸಲಿ ಎಂದು ಸವಾಲು ಹಾಕಿದರು.