ಕೇರಳ, ಅ.21 : ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತ ಉಂಟಾಗಿರುವ ಹಿನ್ನಲೆ ದಕ್ಷಿಣ ಭಾರತದಾದ್ಯಂತ ವರುಣನ ಅಬ್ಬರ ತೀವ್ರ ಮಟ್ಟದಲ್ಲಿದೆ. ಮಳೆ ಮತ್ತು ಪ್ರವಾಹದಿಂದ ನಲುಗಿದ್ದ ದೇವರನಾಡು ಕೇರಳದಲ್ಲಿ ಮತ್ತೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಎರಡು ದಿನಗಳ ಕಾಲ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.