ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಹೆಚ್​.ಡಿ. ದೇವೇಗೌಡರು 

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಹೆಚ್​.ಡಿ. ದೇವೇಗೌಡರು 

ಕೋಲಾರ: ರಾಜ್ಯದೆಲ್ಲದೆ ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು  ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಮತ ಯಾಚನೆಗೆ ಮುಂದಾಗಿದ್ದಾರೆ. ನಿನ್ನೆ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು  ಭರ್ಜರಿ ಮತಯಾಚನೆ ಮಾಡಿದರು.

ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ನನಗೆ ವಯಸ್ಸು 91. ರಾಜ್ಯದ ಲೋಕಸಭಾ ಅಭ್ಯರ್ಥಿಯಾಗಿ ನಿಂತಿರುವ 28 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭ್ಯರ್ಥಿ ಪರ ಪ್ರಚಾರ ಮಾಡಲು ನಿರ್ಧಾರ ಮಾಡಿದ್ದೇನೆ.

ನಾನು ಸಾಮಾನ್ಯ ರೈತನ ಮಗನಾಗಿ ಪಕ್ಷೇತರ ಅಭ್ಯರ್ಥಿಯಾಗಿ ಮೊದಲು ವಿಧಾನಸಭೆಗೆ ಪ್ರವೇಶ ಮಾಡಿದ್ದೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಂತಾಮಣಿ ಶಾಸರಾಗಿದ್ದ ಕೃಷ್ಣರೆಡ್ಡಿ ಅವರ ಸೋಲು ಸಾಕಷ್ಟು ನೋವು ತರಿಸಿತು. ಆದರೆ, ಈ 2024ರ ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಭವಿಷ್ಯ ನುಡಿದರು.. ಇದರ ಬಗ್ಗೆ ನಾನು ಮಾತನಾಡಬೇಕಾದರೆ ಸ್ವಲ್ಪ ಅನುಭವದಿಂದ ಮಾತನಾಡುತ್ತೇನೆಂದು ಸ್ಪಷ್ಟಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos