ಹಾಸನ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿ ಆಗೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ದೇವೇಗೌಡರು, ಮಮತಾ ಸೇರಿ ಯಾರಿಗೂ ಆ ತಾಕತ್ತು ಇಲ್ಲ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ದೇವೇಗೌಡರಿಗೆ ಕುಟುಂಬ ಬಿಟ್ಟರೆ ಬೇರೆ ಯಾರ ಮೇಲೂ ನಂಬಿಕೆ ಇಲ್ಲ. ಯಾರ ಬೆಂಬಲವೂ ಇಲ್ಲದೇ ಅವರು ಒಂಟಿಯಾಗಿದ್ದಾರೆ. ಹಾಸನದಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಹೊರ ಬೀಳಲಿದೆ. ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಇದೆ. ಇಬ್ಬರ ನಡುವೆ ನಂಬಿಕೆ ಇಲ್ಲ, ಹಾಸನ ತುಮಕೂರು, ಮಂಡ್ಯದಲ್ಲಿ ಕಾಂಗ್ರೆಸ್ ನವರು ಕೆಲಸ ಮಾಡುತ್ತಿಲ್ಲ ಎಂದರು.
ಇನ್ನು ಮೋದಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈಗಾಗಲೇ ಹಲವು ಸಮೀಕ್ಷೆಗಳು ಮೋದಿ ಅವರೇ ಪ್ರಧಾನಿ ಎಂಬುದನ್ನು ಹೇಳಿವೆ.