ಅಗಲಿದ ಧನಂಜಯ ಕುಮಾರ್ ಗೆ ಗಣ್ಯರಿಂದ ಅಂತಿಮ ನಮನ

ಅಗಲಿದ ಧನಂಜಯ ಕುಮಾರ್ ಗೆ ಗಣ್ಯರಿಂದ ಅಂತಿಮ ನಮನ

ಮಂಗಳೂರು, ಮಾರ್ಚ್ 05, ನ್ಯೂಸ್ ಎಕ್ಸ್ ಪ್ರೆಸ್:  ಮಂಗಳೂರಿನಲ್ಲಿ ನಿನ್ನೆ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅಂತ್ಯಕ್ರಿಯೆ ಇಂದು ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯಲಿದೆ. ಮಂಗಳೂರಿನ ಕದ್ರಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

 

ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಮತ್ತಿತರರು ಆಗಮಿಸಿ, ಧನಂಜಯ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಬಿಜೆಪಿಯಲ್ಲಿ ಒಂದು ಕಾಲದಲ್ಲಿ ಪ್ರಭಾವಿ ನಾಯಕನಾಗಿದ್ದ ಧನಂಜಯ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಬಿಜೆಪಿಯ ಯಾರೊಬ್ಬ ರಾಜ್ಯ ನಾಯಕರೂ ಬಂದಿಲ್ಲ. ತನ್ನ ಕೊನೆಯ ಕಾಲದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಧನಂಜಯ ಕುಮಾರ್, ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ವಾಗ್ದಾಳಿ ನಡೆಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos