ಚಿತ್ರದುರ್ಗ : ಗ್ರಾ.ಪಂ. ಡಾಟಾ ಎಂಟ್ರಿ ಆಪರೇಟರ್ ವಿಕಾಸಸೌಧದ ಮುಂದೆ ಕುಟುಂಬ ಸಮೇತ ಬಂದು ಧರಣಿ ಕುಳಿತಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿ ಗ್ರಾ.ಪಂ ನೌಕರ ಜಗದೀಶ್ ಕುಮಾರ್ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದಿಂದ ತೆಗೆದುಹಾಕಿದ್ದು, ನ್ಯಾಯಕ್ಕಾಗಿ ವಿಕಾಸಸೌಧದ ಮುಂದೆ ಧರಣಿ ಕುಳಿತಿದ್ದಾರೆ.
“ನಾನು ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದೆ. ವೈಯಕ್ತಿಕ ದ್ವೇಷದಿಂದ ನನ್ನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ.