ಧಾರವಾಡ, ಮಾ.30, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹುಬ್ಬಳ್ಳಿ ಮೂಲದ ಡಾ.ಸೀಮಾ ಸಾಧಿಕ್ ಗೆ ನೀಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ, ಶಾಖಿರ್ ಸನದಿ, ಸದಾನಂದ ಡಂಗನವರ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಇದೀಗ ಸೀಮಾ ಸಾಧಿಕ್ ಗೆ ಟಿಕೆಟ್ ನೀಡಲು ಕಾಂಗ್ರೆಸ್ ಮೇಲೆ ಒತ್ತಾಡ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.