ಧಾರವಾಡ ಟಿಕೆಟ್ ಹಂಚಿಕೆ ಗೊಂದಲ, ಸಿದ್ದರಾಮಯ್ಯರನ್ನ ಭೇಟಿಯಾದ ವಿನಯ್ ಕುಲಕರ್ಣಿ

ಧಾರವಾಡ ಟಿಕೆಟ್ ಹಂಚಿಕೆ ಗೊಂದಲ, ಸಿದ್ದರಾಮಯ್ಯರನ್ನ ಭೇಟಿಯಾದ ವಿನಯ್ ಕುಲಕರ್ಣಿ

ಹುಬ್ಬಳ್ಳಿ, . 2, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭಾ ಚುನಾವನೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಾಜಿ ಸಂಸದ ಐ.ಜಿ ಸನ್ನದಿ ಪುತ್ರ ಶಾಕಿರ್ ಸನದಿಗೆ ಫೈನಲ್ ಆಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಕಾಂಗ್ರೆಸ್ ವರಿಷ್ಠರ ಫೇಕ್ ಪತ್ರದೊಂದಿಗೆ ಸುದ್ದಿ ಹರಿದಾಡುತ್ತಿರೋ ಹಿನ್ನೆಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.

ಹುಬ್ಬಳ್ಳಿಯ ಸಿದ್ದರಾಮಯ್ಯರನ್ನ ಭೇಟಿಯಾಗಿ, ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೇ ಕೊಡಿಸುವಂತೆ ವಿನಯ್, ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಎಂ.ಬಿ ಪಾಟೀಲ್ ಕಡೆಯಿಂದ ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos