ಧರ್ಮದ ಹೆಸರಿನಲ್ಲಿ ದೇಶ ಇಬ್ಭಾಗ: ಖರ್ಗೆ

ಧರ್ಮದ ಹೆಸರಿನಲ್ಲಿ ದೇಶ ಇಬ್ಭಾಗ: ಖರ್ಗೆ

ಕಲಬುರಗಿ, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್ : ಕಾಂಗ್ರೆಸ್  ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಕಾಂಗ್ರೆಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ದೇಶ ಇಬ್ಭಾಗ ಮಾಡುವ ಹುನ್ನಾರ ನಡೆಯುತ್ತಿದೆ. ದೇಶಕ್ಕೆ ಶಾಶ್ವತ ವಿಚಾರಗಳ ಅವಶ್ಯಕತೆ ಇದೆ. ಜನರು ಇನ್ನಾದರೂ ಜಾಗೃತಗೊಳ್ಳಬೇಕಾದ ಅಗತ್ಯತೆ ಇದೆ ಎಂದು ಹೇಳಿದ್ದಾರೆ.

ನಾವೂ ದೇಶ ಭಕ್ತರೇ, ನಾವೂ ಪಾಕಿಸ್ತಾನದ ವಿರುದ್ಧ ಸಮರ ಸಾರಿದ್ದೇವೆ. ಕಾಂಗ್ರೆಸ್ ನವರೆಲ್ಲಾ ಪಾಕಿಸ್ತಾನದವರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾತಿ, ಧರ್ಮ ಹಾಗೂ ಪಾಕಿಸ್ತಾನದ ಹೆಸರಿನಲ್ಲಿ ವಿಷದ ಬೀಜ ಬಿತ್ತಿ ಜರನ ಕಣ್ಣಿಗೆ ಮಂಕೂಬೂದಿ ಎರಚಿ ಮತ ಪಡೆಯುವುದನ್ನೇ ಕೆಲವರು ಕಾಯಕ ಮಾಡಿಕೊಂಡಿದ್ದಾರೆ. ಇವಿಎಂ ಮೇಲೆ ನನಗೆ ಅನುಮಾನವಿಲ್ಲ. ಆದರೆ, ದೇಶದ ಜನತೆ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos