ಡಿಕೆಶಿ ಮತ್ತೆ ಟೆಂಪಲ್ ರನ್

ಡಿಕೆಶಿ ಮತ್ತೆ ಟೆಂಪಲ್ ರನ್

ಬೆಂಗಳೂರು, ಜ. 24: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ, ಅಧ್ಯಕ್ಷರ ನೇಮಕ ವಿಳಂಬವಾದ ಹಿನ್ನೆಲೆಯಲ್ಲಿ ದೇವಸ್ಥಾನಗಳ ಯಾತ್ರೆ ಆರಂಭಿಸಿದ್ದಾರೆ.

ಮಧ್ಯಪ್ರದೇಶದ ಧಾತಿಯಾದ ಪಿತಾಂಬರ ಪೀಠದ ಬಾಗಲ್ಮುಖೀ ಮತ್ತು ಧಮವತಿ ದೇಗುಲದಲ್ಲಿ ವಿಶೇಷ ಹೋಮ ಮಾಡಿಸಿದ್ದಾರೆ. 2 ದಿನಗಳ ಯಾತ್ರೆ ಕೈಗೊಂಡಿದ್ದಾರೆ.

ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡುವುದು ಖಚಿತವಾಗಿದ್ದರೂ ಹೈಕಮಾಂಡ್ ಅಧಿಕೃತ ಘೋಷಣೆ ಮಾಡದೇ ವಿಳಂಬ ಮಾಡುತ್ತಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷಕ್ಕಾಗಿ ತಾವು ಮಾಡಿದ ತ್ಯಾಗ ಮತ್ತು ಪಕ್ಷ ನಿಷ್ಠೆಗೆ ಬೆಲೆಯೇ ಇಲ್ಲದಂತಾಗಿದೆ ಎಂದು ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos