ಐಟಿ ಆಯುಕ್ತರ ವಿರುದ್ಧ ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ

ಐಟಿ ಆಯುಕ್ತರ ವಿರುದ್ಧ ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ

ಬೆಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್:  ಕರ್ನಾಟಕ-ಗೋವಾ ವೃತ್ತದ ಆದಾಯ ತೆರಿಗೆ ಆಯುಕ್ತ ಬಾಲಕೃಷ್ಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಪತಿ ಮತ್ತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಆಪ್ತರ ಮೇಲೆ ಮೊನ್ನೆಯಷ್ಟೆ ನಡೆದ ಐಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಮತದಾನ ಕೆಲವೇ ದಿನಗಳಿರುವಾಗ ರಾಜಕೀಯವಾಗಿ ನಮಗೆ ಹಾನಿ ಉಂಟು ಮಾಡಲೆಂದು ದುರುದ್ದೇಶಪೂರ್ವಕವಾಗಿ ಈ ದಾಳಿಗಳನ್ನು ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಷ್ಟ್ರಪತಿ ರಮಾನಾಥ ಕೋವಿಂದ್, ಕೇಂದ್ರ ಚುನಾವಣಾ ಆಯೋಗ, ಸಿಬಿಡಿಟಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷವು ಗೋವಾ-ಕರ್ನಾಟಕ ವೃತ್ತದ ಐಟಿ ಆಯುಕ್ತರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಗೋವಾ-ಕರ್ನಾಟಕ ವೃತ್ತದ ಐಟಿ ಆಯುಕ್ತರ ಪ್ರಾಮಾಣಿಕತೆ ಅನುಮಾನಸ್ಪತವಾಗಿದ್ದು, ಅವರು ಜೆಡಿಎಸ್-ಕಾಂಗ್ರೆಸ್‌ ವಿರುದ್ಧ ಹಗೆತನದಿಂದ ಕಾರ್ಯನಿರ್ವಹಿಸುತ್ತಿದ್ದಾರೆ, ಆಯುಕ್ತ ಬಾಲಕೃಷ್ಣ ಅವರು ಬಜೆಪಿಯ ಏಜೆಂಟ್‌ ಅಂತೆ ವರ್ತಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos