ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಕಾಂಗ್ರೆಸ್ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಸದ್ದು ಮಾಡುತ್ತಿದ್ದು. ಸತೀಶ್ ಜಾರಕಿಹೊಳಿ ಮತ್ತೆ ಗಮ ಸೆಳೆಯುತ್ತಿದ್ದಾರೆ. ನಾನು ಡಿಸಿಎಂ ಆಗಬೇಕು ಎಂದು ಕಾರ್ಯಕರ್ತರು ಹಾಗೂ ಮಠಾಧೀಶರು ಒತ್ತಾಯಿಸುತ್ತಿರೋದನ್ನು ವರಿಷ್ಠರ ಗಮನಕ್ಕೆ ತಂದಿರೋದಾಗಿ ಹೇಳಿದ್ದರು.
ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ದೆಹಲಿಯಲ್ಲಿ ಇರುವಾಗಲೇ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳೆ ನಿವಾಸದಲ್ಲಿ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಸಚಿವ ಸತೀಶ್ ಜಾರಕಿಹೊಳೆ ನಿವಾಸದಲ್ಲಿ ತಡರಾತ್ರಿ ಸಭೆಯಲ್ಲಿ ಪರಮೇಶ್ವರ, ಹೆಚ್ ಸಿ ಮಹದೇವಪ್ಪ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಕೆಎಚ್ ಮುನಿಯಪ್ಪ, ಭಾಗಿಯಾಗಿದ್ದರು. ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ ನಾಯಕರು. ಭಾರಿ ಕೂತುಹಲ ಮೂಡಿಸಿದ ಸಚಿವ ಡಿನ್ನರ್ ಮೀಟಿಂಗ್.