ಡಿಕೆ ಸಹೋದರರಿಗೆ ಡಾ ಸಿಎನ್ ಮಂಜುನಾಥ್‌ ಟಾಂಗ್

ಡಿಕೆ ಸಹೋದರರಿಗೆ ಡಾ ಸಿಎನ್ ಮಂಜುನಾಥ್‌ ಟಾಂಗ್

ರಾಮನಗರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಅವರು ಸ್ಪರ್ಧಿಸುತ್ತಿದ್ದಾರೆ ಹಾಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಅವರು ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಭಾರಿ ಚರ್ಚೆಗೆ ಕಾರಣವಾಗಿದೆ.  ಈ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೊದಲು ರಾಮನಗರಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮನಸ್ಸು ಮತ್ತು ಹೃದಯಗಳು ಒಂದಾಗಿವೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 6.75 ಲಕ್ಷ ಮತ ಗಳಿಸಿದ ಶಾಸಕ ಡಾ ಅಶ್ವಥ್ ನಾರಾಯಣ ಅವರೊಂದಿಗೆ ಎಲ್ಲ 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ, ಎಲ್ಲ ಕಡೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಮೊನ್ನೆ ಪಕ್ಷದ ವರಿಷ್ಠರಾದ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ನಡೆಸಿದ ರೋಡ್ ಶೋ ಅಭೂತಪೂರ್ವ ಯಶ ಕಂಡಿದೆ, ಹೀಗಾಗಿ ದಿನೇದಿನೆ ತಮ್ಮ ಆತ್ಮವಿಶ್ವಾಸ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ಡಿಕೆ ಸಹೋದರರು ಮಾಡುವ ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಮಂಜುನಾಥ್ ಅದಕ್ಕೆಲ್ಲ ಮತದಾರರೇ ಉತ್ತರ ನೀಡುತ್ತಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos