ಬೆಂಗಳೂರು, ಡಿ. 21 : ರಾಜ್ಯ ಕಾಂಗ್ರೆಸ್ನಲ್ಲಿ ಈಗ ಬದಲಾವಣೆ ಗಾಳಿ ಬೀಸುವ ಸಾಧ್ಯತೆ ಇದೆ. ಪ್ರಭಾವಿ ನಾಯಕರ ಆಟ-ಮೇಲಾಟಗಳಿಗೆ ಮೈದಾನವೂ ಸಜ್ಜಾಗಿದೆ. ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಡಿಕೆಶಿ ಬ್ಯಾಟ್ ಬೀಸಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ಪಿಇಎಸ್ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಮಾಧ್ಯಮ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಬೆಂಗಳೂರಿನ ಪಿಇಎಸ್ ಮೈದಾನದಲ್ಲಿ ಶನಿವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು.ಇದು ರಾಜ್ಯ ರಾಜ್ಯದಲ್ಲಿ ಹೊಸ ಇನಿಂಗ್ಸ್ಗೆ ಮುಹೂರ್ತ ಎಂಬಂತೆ ಡಿಕೆ ಶಿವಕುಮಾರ್ ಬ್ಯಾಟಿಂಗ್, ಬೌಲಿಂಗ್ ಎಲ್ಲದರಲ್ಲೂ ತಮ್ಮ ಕೈಚಳಕ ತೋರಿದ್ದಾರೆ.
ಮುಂದಿನ ದಿನಗಳ ಬೆಳವಣಿಗೆಗಳ ದಿಕ್ಸೂಚಿ ಬಗ್ಗೆ ರಾಜಕೀಯ ಪಡಸಾಲೆ ಭಾರಿ ಚರ್ಚೆಗಳು ನಡೆಯುತ್ತಿವೆ.