ನವದೆಹಲಿ, ಸೆ. 14: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೀಗಾಗಿ ಕೇಸ್ ವಿಚಾರಣೆ ಅರ್ಧಕ್ಕೆ ನಿಲ್ಲಿಸಿದ ಇಡಿ ಅಧಿಕಾರಿಗಳನ್ನು ಡಿಕೆಶಿಯನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದೀಗ ವೈದ್ಯರು ಕಾಂಗ್ರೆಸ್ ಟ್ರಬಲ್ ಶೂಟರ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇಡಿ ಅಧಿಕಾರಿಗಳು ವಶಕ್ಕೆ ಪಡೆದ ದಿನದಿಂದಲೂ ಡಿಕೆಶಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಬಂಧನಕ್ಕೂ ಮುನ್ನವೇ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಬಿಪಿ ಮತ್ತು ಹೈ ಶುಗರ್ನಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದ್ದವು.