ಸಿಎಂ ಆಗುವ ಸುಳಿವು ಕೊಟ್ಟ ಡಿ ಕೆ ಶಿವಕುಮಾರ್‌

ಸಿಎಂ ಆಗುವ ಸುಳಿವು ಕೊಟ್ಟ ಡಿ ಕೆ ಶಿವಕುಮಾರ್‌

ಮೈಸೂರು:ದೆಹಲಿಯಲ್ಲಿ ಏನು ಆಗಬೇಕೋ ಎಲ್ಲಾವೂ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗುವ ಸುಳಿವುವನ್ನ ಡಿ ಕೆ ಶಿವಕುಮಾರ್‌ ನೀಡಿದ್ದಾರೆ. ಮುಖ್ಯಮಂತ್ರಿಯಾಗುವ ಬಯಕೆಯನ್ನು ಮತ್ತೊಮ್ಮೆ ಪರೋಕ್ಷವಾಗಿ ಹೊರಹಾಕಿದ ಶಿವಕುಮಾರ್ ತಮ್ಮ ಸರ್ಕಾರ ಈ ಅವಧಿಗೆ ಮಾತ್ರ ಅಲ್ಲ ಮುಂದಿನ 5-ವರ್ಷದ ಅವಧಿಗೂ ಅಧಿಕಾರದಲ್ಲಿರುತ್ತದೆ ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ಹೋದಲ್ಲೆಲ್ಲ ಅವರ ಅಭಿಮಾನಿಗಳು, ಹಿತೈಷಿಗಳು ಮುಂದಿನ ಸಿಎಂ ಎಂದು ಜೈಕಾರ ಹಾಕುವುದುಂಟು. ಸಿಎಂ ಆಗುವ ಆಸೆಯನ್ನು ಸ್ವತಃ ಡಿ ಕೆ ಶಿವಕುಮಾರ್ ಕೂಡ ಆಗಾಗ ತೋರ್ಪಡಿಸಿಕೊಳ್ಳುತ್ತಿರುತ್ತಾರೆ.

ನಿನ್ನೆ ಮೈಸೂರಿನಲ್ಲಿ ನಡೆದ ಮೈಸೂರು-ಕೊಡಗು ಜಿಲ್ಲಾ ಒಕ್ಕಲಿಗ ಜನಾಂಗದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿ ಕೆ ಶಿವಕುಮಾರ್, ಮೈಸೂರು ಭಾಗದಲ್ಲಿ ನಮ್ಮ ಸಮಾಜದವರಿಗೆ ಸ್ವಲ್ಪ ಸಮಸ್ಯೆ ಆಗಿರುವುದು ನಿಜ. ಈಗ ಸಚಿವ ವೆಂಕಟೇಶ್, ಹರೀಶ್ ಗೌಡ ಮುಂದಾಳತ್ವ ವಹಿಸಿದ್ದಾರೆ. ನಾನು ನಿಮ್ಮೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ನೀವು ತಲೆಕೆಡಿಸಿಕೊಳ್ಳಲು ಹೋಗಬೇಡಿ, ಸ್ವಲ್ಪ ದಿನ ಕಾಯಿರಿ ಎಂದು ಸ್ಥಳೀಯ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos