ಬಿಜೆಪಿ ಅವರ ಕನಸಿನಲ್ಲಿಯೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲಾ: ಡಿಕೆ ಶಿವಕುಮಾರ್

ಬಿಜೆಪಿ ಅವರ ಕನಸಿನಲ್ಲಿಯೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲಾ: ಡಿಕೆ ಶಿವಕುಮಾರ್

ಹಾಸನ: ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಸ್ಪರ್ಧಿಸುತಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಅರಕಲಗೂಡುನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರ್ಜರಿ ಪ್ರಚಾರ ಮಾಡಿದ್ದರು. ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು, ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಕೊಟ್ಟಿದೆ ನಾವು ಕೊಟ್ಟಿರುವ ಗ್ಯಾರೆಂಟಿ ಯೋಜನೆಗಳು ಬಡಜನರು ನಮ್ಮ ಜೀವನವನ್ನು ಕಟ್ಟಿ ನಡೆಸಲು ನೀಡಿರುವುದು.

ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿರೋದು ಬೆಲೆ ಏರಿಕೆ ಜಾಸ್ತಿಯಾಗಿ ಆದಾಯ ಪಾತಾಳಕ್ಕೆ ಕುಸಿದಿದೆ. ಹೆಣ್ಣು ಮಕ್ಕಳಿಗೆ ಸಂಸಾರ ನಡೆಸಲು ಸಾಕಾಗುವುದಿಲ್ಲ ಎಂದು ದಿನನಿತ್ಯ ಬಳಸುವಂತಹ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಸಾಮಾನ್ಯ ಜನರಿಗೆ ಅನುಕೂಲವಾಗಲಿ ಅಂತ ನಾವು ಕೊಟ್ಟಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಶಾಶ್ವತವಾಗಿರುವುದಿಲ್ಲ ಎಂದು ಬಿ.ವೈ ವಿಜಯೇಂದ್ರ ಅವರ ಹೇಳಿಕೆಗೆ ಡಿಕೆ ಶಿವಕುಮಾರ್‌ ಉತ್ತರ ನೀಡಿದ್ದಾರೆ. ಬಡವರ ಹೊಟ್ಟೆಪಾಡಿಗೋಸ್ಕರ ನೀಡುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸ್ತೀವಿ ಅಂತ ನಿಮ್ಮನ್ನೆಲ್ಲ ಎದುರಿಸುತ್ತಿದ್ದಾರೆ. ಯಡಿಯೂರಪ್ಪನವರೇ, ವಿಜಯೇಂದ್ರನವರೇ, ಅಶೋಕನವರೇ ನಿಮ್ಮ ಕನಸಿನಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಟಾಂಗ್‌ ನೀಡಿದ್ದಾರೆ.

ನಮ್ಮ ಸರ್ಕಾರ 5 ವರ್ಷದ ಸರ್ಕಾರವಲ್ಲ ಇನ್ನೂ ಮುಂದಿನ ಐದು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿರುತ್ತದೆ. ಆದ್ದರಿಂದ ನೀವು ಯಾರು ಯೋಚನೆ ಮಾಡಬೇಕಾಗಿಲ್ಲ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos