ರಾಜಕೀಯ ‘ಜಂಜಾಟ’ದಿಂದ ದೂರ: ‘ಡಿಕೆಶಿ’ ವಿದೇಶಿ ಪ್ರವಾಸ

ರಾಜಕೀಯ ‘ಜಂಜಾಟ’ದಿಂದ ದೂರ:  ‘ಡಿಕೆಶಿ’ ವಿದೇಶಿ ಪ್ರವಾಸ

ಬೆಂಗಳೂರು, ಮೇ. 21, ನ್ಯೂಸ್ ಎಕ್ಸ್ ಪ್ರೆಸ್ :  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಚಾರ ಶುರುವಾಗಿದ್ದು, ವಿದ್ಯುನ್ಮಾನ ಮತ ಯಂತ್ರಗಳಲ್ಲಿ (ಇವಿಎಂ) ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಮತ ಎಣಿಕೆ ದಿನಗಣನೆ ಆರಂಭವಾಗಿದೆ. ಈಗ ರಾಜಕೀಯ ಜಂಜಾಟದಿಂದ ದೂರವಾಗಿ ಉಳಿಯಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರು ವಿದೇಶಗಳಿಗೆ ಪ್ರವಾಸಕ್ಕೆ ತೆರಳುತ್ತಿದ್ದಾರೆ.  ಇನ್ನೂ  ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ  ವಿಧಾನಸಭೆ ಉಪಚುನಾವಣೆಯಲ್ಲಿ ಸಕ್ರಿಯರಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರು ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ.

ಭಾನುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆದಿದ್ದ ರಾಜ್ಯ ನಾಯಕರ ಸಭೆಯಲ್ಲಿ ಪಾಲ್ಗೊಂಡು, ಸೋಮವಾರ ಬೆಳಗ್ಗೆ ಪತ್ನಿ ಹಾಗೂ ಮಕ್ಕಳೊಂದಿಗೆ ಒಂದು ವಾರ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ.  ಆದರೆ, ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಘೋಷಣೆಯಾಗಿದ್ದರಿಂದ ಪಕ್ಷ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ವಹಿಸಿದ್ದರಿಂದ ತಮ್ಮ ವಿದೇಶ ಪ್ರವಾಸವನ್ನು ಮುಂದೂಡಿದ್ದರು. ಈಗ ಚುನಾವಣೆ ಮುಕ್ತಾಯವಾಗಿದ್ದರಿಂದ ಒಂದು ವಾರ ಕಾಲ ರಾಜಕೀಯ ಗೊಂದಲದಿಂದ ದೂರ ಉಳಿಯಲು ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos