ಕಟುಕ ಹೃದಯಿ ಆರ್‌ ಅಶೋಕ್‌ ಹೇಳಿಕೆಗೆ ಟಾಂಗ್‌ ನೀಡಿದ ಡಿಕೆ ಸುರೇಶ್

ಕಟುಕ ಹೃದಯಿ ಆರ್‌ ಅಶೋಕ್‌ ಹೇಳಿಕೆಗೆ ಟಾಂಗ್‌ ನೀಡಿದ ಡಿಕೆ ಸುರೇಶ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ ಮಂಜುನಾಥ್ ಅವರು ಸ್ಪರ್ಧಿಸುತ್ತಿದ್ದಾರೆ ಅವರ ವಿರುದ್ಧವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ಅವರು ಸ್ಪರ್ಧಿಸುತ್ತಿದ್ದಾರೆ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಆನೇಕಲ್ ಪಟ್ಟಣದಲ್ಲಿ ಇಂದು ಮತಬೇಟೆ ನಡೆಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮಾಧ್ಯಮಗಳೊಂದಿಗೆ ಮಾತಾಡುವಾಗ, ಬಿಜೆಪಿ ನಾಯಕ ಆರ್ ಅಶೋಕ ಅವರು ಕಟುಕ ಹೃದಯಿಗಳು ಎಂದು ಮಾಡಿರುವ ಕಾಮೆಂಟ್ ಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಅವರಿಗೆ ತನ್ನ ಬಗ್ಗೆ ಕಾಮೆಂಟ್ ಮಾಡುವ ಯೋಗ್ಯತೆ ಇಲ್ಲಾ.

ಬಿಜೆಪಿಯೊಂದಿಗೆ ಮೈತ್ರಿ ಬೆಳೆಸಿರುವವರ ಬಗ್ಗೆ ಅವರು ಏನು ಬೇಕಾದರೂ ಹೇಳಿಕೊಳ್ಳಲಿ, ಕಟುಕ ಹೃದಯ ಇರೋದು ಬಿಜೆಪಿಗೆ ಹೊರತು ಕಾಂಗ್ರೆಸ್ ಗೆ ಅಲ್ಲ, ತಮ್ಮ ಪಕ್ಷ ಬಡವರ ಸಂಕಷ್ಟಗಳನ್ನು ಅರ್ಥಮಾಡಿಕೊಂಡು ಅವರಿಗೆ ನೆರವಾಗುವ ಕೆಲಸಮಾಡುತ್ತದೆ ಎಂದರು. ಕೋವಿಡ್ ಸಮಯದಲ್ಲಿ ತಾನು ಮಾಡಿದ ಕೆಲಸಗಳು ಜನರಿಗೆ ಗೊತ್ತಿವೆ, ಅವರು ಯಾವುದನ್ನೂ ಮರೆತಿಲ್ಲ ಎಂದು ಸುರೇಶ್ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos