ಮೊದಲ ದಿನವೇ ನಾಮಮತ್ರ ಸಲ್ಲಿಸಿದ ಡಿಕೆ ಸುರೇಶ್

ಮೊದಲ ದಿನವೇ ನಾಮಮತ್ರ ಸಲ್ಲಿಸಿದ ಡಿಕೆ ಸುರೇಶ್

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ ಸಿಎನ್‌ ಮಂಜುನಾಥ್‌ ಅವರು ಕಣಕ್ಕಿಳಿದಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಅಳಿಯ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಬಡ ರೋಗಿಗಳ ಪಾಲಿನ ಭರವಸೆಯಾಗಿ ಬದಲಾಯಿಸಿದ ಡಾ.ಮಂಜುನಾಥ್‌ ಜನಪ್ರಿಯ ವ್ಯಕ್ತಿ. ಸದ್ಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ಜೋರಾಗಿದೆ.

ಇಂದಿನಿಂದ ಲೋಕಸಭಾ ಚುನಾವಣಾ ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿರುವ ರಾಜ್ಯದ ಮತದಾರರು. ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕಡೇ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್‌ಗೆ ಕಡೇ ದಿನವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಮಮತ್ರ ಸಲ್ಲಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos