ವಿರೋಧಿಗಳಿಗೆ ಡಿಕೆಶಿ ‍ಫುಲ್ ಟಾಂಗ್

ವಿರೋಧಿಗಳಿಗೆ ಡಿಕೆಶಿ ‍ಫುಲ್ ಟಾಂಗ್

ನವದೆಹಲಿ, ಅ. 25: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ರಾಜಕೀಯ ಸನ್ಯಾಸತ್ವ ಪಡೆದು ಉದ್ಯಮ ಮಾಡುವಂತೆ ಸ್ನೇಹಿತರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ರಾಜಕೀಯ ಬಿಟ್ಟು ಉದ್ಯಮದಲ್ಲಿ ತೊಡಗಿಕೊಳ್ಳುವಂತೆ ಕೆಲವು ಸ್ನೇಹಿತರು ಸಲಹೆ ನೀಡಿದ್ದು, ಇದಕ್ಕೆಲ್ಲ ಕೆಲವೇ ದಿನಗಳಲ್ಲಿ ಸೂಕ್ತ ಕಾಲದಲ್ಲಿ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ಜನರ ಬೆಂಬಲ ನನಗಿದೆ. ಕಾನೂನಿನ ಮೇಲೆ ಗೌರವವಿದ್ದು, ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ತಮಗೆ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ತಮ್ಮ ತಾಯಿ ಹಾಗೂ ಪತ್ನಿಯ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸುವಂತೆ ಮನವಿ ಮಾಡಿದ್ದೇನೆ.

ನಮ್ಮ ನಾಯಕರನ್ನೆಲ್ಲ ಭೇಟಿ ಮಾಡಿ ಬೆಂಗಳೂರಿಗೆ ತೆರಳುತ್ತೇನೆ ಎಂದು ಹೇಳಿದ್ದಾರೆ. ಎಲ್ಲ ಪಕ್ಷದ ಮುಖಂಡರು ನಾಯಕರು ನನಗೆ ಬೆಂಬಲ ನೀಡಿದ್ದಾರೆ. ಕೆಲವರು ಮಾತ್ರ ಖುಷಿಪಟ್ಟಿದ್ದಾರೆ. ಏನೂ ಮಾಡಲು ಆಗಲ್ಲ. ಅವರಿಂದಲೇ ನಾವು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅವರ ಮೇಲೆ ನನಗೆ ಬೇಸರವಿಲ್ಲ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos