ಬೆಂಗಳೂರು, ಅ.25 : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಸ್ಟೈಲಿಶ್ ಆಗಿ ಗಡ್ಡ ಬಿಟ್ಟದ್ದಾರೆ. ಇವರನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.
ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿ ಬಂಧನಕ್ಕೊಳಗಾಗಿ ತಿಹಾರ್ ಜೈಲು ವಾಸ ಅನುಭವಿಸಿದ್ದ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆಶಿವಕುಮಾರ್ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ನಡುವೆ ಡಿಕೆಶಿಯ ಸ್ಟೈಲಿಶ್ ಗಡ್ಡ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ಒಂದು ತಿಂಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ (ಇಡಿ) ಬಂಧನದ ಬಳಿಕ ತಿಹಾರ್ ಜೈಲುವಾಸದಲ್ಲಿದ್ದ ಡಿಕೆ ಜೈಲಿನಿಂದ ಹೊರ ಬಂದಿದ್ದು, ಅವರ ಮುಖಚಹರೆಯಲ್ಲಿ ಬದಲಾವಣೆ ಕಂಡು ಬಂದಿದೆ. ಜೈಲುವಾಸದ ನಂತರ ಡಿ.ಕೆ ಶಿವಕುಮಾರ್ ಅವರು ಗಡ್ಡ ಬಿಟ್ಟಿದ್ದು, ಈ ಟೈಗರ್ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ದೈವ ಭಕ್ತ ಡಿಕೆಶಿ : ಡಿ.ಕೆ ಶಿವಕುಮಾರ್ ಅವರು ದೈವಭಕ್ತರಾಗಿದ್ದು, ತಮ್ಮ ಮನೆ ದೇವರು ಕಬ್ಬಾಳಮ್ಮನ ದರ್ಶನದ ನಂತರ ಗಡ್ಡ ತೆಗೆಯಲು ಹಾಗೇ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಕೆಲ ಅವರ ಅಭಿಮಾನಿಗಳು ನೊಣವಿನಕೆರೆ ಅಜ್ಜಯ್ಯ ಅವರ ಮಹಾನ್ ಭಕ್ತರಾಗಿರುವ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನವರ ದರ್ಶನ ಮಾಡಿ ನಂತರ ಗಡ್ಡ ತೆಗೆಯಬೇಕು ಎಂದು ಹರಕೆ ಮಾಡಿಕೊಂಡಿರಬಹುದು ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ ಡಿ.ಕೆ ಶಿವಕುಮಾರ್ ಪ್ರತೀಕಾರ ತೀರಿಸಿಕೊಳ್ಳಲು ಗಡ್ಡ ಬಿಟ್ಟಿದ್ದಾರೆ.