ಬೆಂಗಳೂರು: ಜಲಸಂಪನ್ಮೂ ಲ ಸಚಿವ ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದ್ದು, ಇಂದು ಇಡಿ
ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಕುಟುಂಬ ಸೇರಿದಂತೆ 9 ಮಂದಿಗೆ ನೋಟಿಸ್ ಜಾರಿಗೊಳಿಸಿದೆ.
ಐಟಿ ದಾಳಿ ವೇಳೆ ದೆಹಲಿಯ ಡಿ.ಕೆ.ಶಿವಕುಮಾರ್
ನಿವಾಸದಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿತ್ತು. ಈ ಸಂಬಂಧ ಎಫ್ಐಆರ್ ಕೂಡಾ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ
ಜನವರಿ 26ರಂದು ನೋಟಿಸ್ ನೀಡಲಾಗಿತ್ತು. ಆದ್ರೆ ಕಳೆದ 3ದಿನಗಳಿಂದ ತಮ್ಮ ಆಡಿಟರ್ ಮನೆಯಲ್ಲೇ ಬಿಡು
ಬಿಟ್ಟಿದ್ದ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ
ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪ್ರಕರಣದ ವಿಚಾರಣೆ ಸಂಬಂಧ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಬೇಕಿದೆ.