ಕೊರೊನಾ ವೈರಸ್​​ ಕಾಲರ್ ಟ್ಯೂನ್ ಬಗ್ಗೆ ಡಿಕೆಶಿ ವ್ಯಂಗ್ಯ

ಕೊರೊನಾ ವೈರಸ್​​ ಕಾಲರ್ ಟ್ಯೂನ್ ಬಗ್ಗೆ ಡಿಕೆಶಿ ವ್ಯಂಗ್ಯ

ಬೆಂಗಳೂರು, ಮಾ. 10: ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದ್ದು, ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ. ಸಮಸ್ಯೆ ಇರುವೆಡೆ ಕ್ರಮ ಕೈಗೊಳ್ಳಬೇಕೇ ಹೊರತು ಈ ರೀತಿ ಸಾಮೂಹಿಕವಾಗಿ ಜನರನ್ನು ಹೆದರಿಸುವುದು ಸಲ್ಲದು ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ” ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ.

ಇದೀಗ ದೇಶದ ಜನ ಕೊರೊನಾ ವೈರಸ್ ನಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ ಎಂದು ಕೇಂದ್ರದ ವಿರುದ್ಧ ಗರಂ ಆಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos