ರಾಮನಗರ, ಸೆ. 4 : ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿಕೆಶಿ ಬೆಂಬಲಿಗರ ಮೇಲೆ ಎಫ್ಐಆರ್ ದಾಖಲಾಗಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ 15 ಮಂದಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕನಕಪುರದಲ್ಲಿ ಪ್ರತಿಭಟನೆ ನಡೆಸಿದ ಡಿಕೆಶಿ ಬೆಂಬಲಿಗರ ಮೇಲೆ ಎಫ್ಐಆರ್ ದಾಖಲಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್ಐಆರ್ ಹಾಕಲಾಗಿದೆ. ನಗರದಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಸ್ವತಃ ಎಸ್ಪಿ ಅವರೇ ನಗರದ ಬೀದಿ ಬೀದಿಗಳಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ.